ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ ಅಬ್ಬರಿಸಿದ ವರುಣ: ಬಿಸಿಲಿಗೆ ಬಳಲಿದ್ದ ಜನರ ಮೊಗದಲ್ಲಿ ಮಂದಹಾಸ - ಚಿಕ್ಕಮಗಳೂರಲ್ಲಿ ಮಳೆ ಆರಂಭ

ಚಿಕ್ಕಮಗಳೂರು ಸೇರಿದಂತೆ ಬಾಳೆಹೊನ್ನೂರು, ಕಳಸ, ಶೃಂಗೇರಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಬೇಸಿಗೆ ಬಿಸಿಲಿಗೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.

heavy rain fall in chikkamagaluru
ಚಿಕ್ಕಮಗಳೂರು ಸುತ್ತ ಮಳೆಯ ಆರ್ಭಟ

By

Published : Apr 18, 2020, 7:04 PM IST

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಇಂದು ಧಾರಾಕಾರವಾಗಿ ಮಳೆ ಸುರಿದಿದೆ.

ಚಿಕ್ಕಮಗಳೂರು ಸುತ್ತಮುತ್ತ ಮಳೆಯ ಆರ್ಭಟ

ನಗರ ಸೇರಿದಂತೆ ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ ಸುತ್ತಮುತ್ತ ಮಳೆ ಸುರಿಯುತ್ತಿದೆ. ಬೇಸಿಗೆಯ ಬಿಸಿಲಿಗೆ ಕಾದ ಹಂಚಿನಂತಾಗಿದ್ದ ಧರೆಗೆ ವರುಣ ತಂಪೆರೆದಿದ್ದಾನೆ.

ಭಾರಿ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಿದ್ದು, ಮಲೆನಾಡಿನ ಕೆಲ ಭಾಗದಲ್ಲೂ ಮೋಡ ಕವಿದ ವಾತಾವರಣವಿದೆ.

ABOUT THE AUTHOR

...view details