ಚಿಕ್ಕಮಗಳೂರು: ಇಂದು ಸಹ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಎನ್ಆರ್ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ದೇವಸ್ಥಾನಗಳು, ಧಾರ್ಮಿಕ ಸ್ಥಳಗಳು ಮುಳುಗಡೆಯಾಗಿವೆ. ಇತಿಹಾಸ ಪ್ರಸಿದ್ಧ ಮಾರ್ಕಂಡೇಶ್ವರ ಗೋರಿಗಂಡಿಯಲ್ಲಿರುವ ಚರ್ಚ್ ಹಾಗೂ ಮಸೀದಿ ಮುಳುಗಡೆಯ ಹಂತ ತಲುಪಿವೆ.
ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಖಾಂಢ್ಯ-ಬಾಳೆಗದ್ದೆಯ ತೂಗು ಸೇತುವೆ ಕೊಚ್ಚಿ ಹೋಗಿದೆ. ಭದ್ರಾ ನದಿಯನ್ನು ದಾಟಲು ಸಾಧ್ಯವಾಗದೆ ಬಾಳೆಗದ್ದೆ ಗ್ರಾಮದ 50ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿವೆ. ಹೇಮಾವತಿ, ತುಂಗಾ, ಭದ್ರಾ ನದಿ ಪಾತ್ರದ ಹಲವು ಗ್ರಾಮಗಳು ಮುಳುಗಡೆ ಭೀತಿಯಲ್ಲಿವೆ.