ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಬಿಜೆಪಿ ಸೇರಿದ ಕಾಂಗ್ರೆಸ್-ಜೆಡಿಎಸ್ ಮುಖಂಡರು - ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲ ಮುಖಂಡರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತ್ಯಜಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

bjp
bjp

By

Published : Oct 27, 2020, 7:14 PM IST

ಚಿಕ್ಕಮಗಳೂರು:ಕಾಂಗ್ರೆಸ್,ಜೆಡಿಎಸ್​​ನ ಕೆಲ ಮುಖಂಡರು ಬಿಜೆಪಿ ಸಿದ್ದಾಂತ ಒಪ್ಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ವಿಧಾನ ಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮ ಪಂಚಾಯತ್ ಸುತ್ತಮುತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ಕೆಲ ಮುಖಂಡರು ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇವರನ್ನು ಎಂ ಕೆ ಪ್ರಾಣೇಶ್ ಸ್ವಾಗತಿಸಿ, ಬಿಜೆಪಿ ಪಕ್ಷ ಯಾವುದೇ ಬೇಧ ಭಾವ ಮಾಡದೇ ಸರ್ವರ ಏಳಿಗೆಗಾಗಿ ಶ್ರಮಿಸುವ ಪಕ್ಷವಾಗಿದೆ ಎಂದೂ ಅವರಿಗೆ ಭರವಸೆ ನೀಡಿದರು.

ಬಿಜೆಪಿ ಸೇರಿದ ಮುಖಂಡರು

ಬಿಜೆಪಿ ಪಕ್ಷವು ಸಿದ್ಧಾಂತ ಮತ್ತು ಸಾಧನೆಯ ತಳಹದಿಯಲ್ಲಿ ಬೆಳೆದು ಬಂದ ಪಕ್ಷವಾಗಿದ್ದು, ಕಾರ್ಯಕರ್ತರೇ ಪಕ್ಷದ ಜೀವಾಳ ಆಗಿದ್ದಾರೆ. ಹಾಗಾಗಿಯೆ ನಮ್ಮದು ವಿಶ್ವದ ಅತಿ ದೊಡ್ಡ ಪಕ್ಷವಾಗಿದ್ದು, ಯಾವುದೇ ಕಾರ್ಯಕರ್ತರ ಮನಸನ್ನು ಪಕ್ಷದ ನಾಯಕರು ಮತ್ತು ಜನಪ್ರತಿನಿದಿಗಳು ನೋಯಿಸಬಾರದು. ನಮ್ಮಲ್ಲಿ ಯಾವುದೇ ಮನಸ್ಥಾಪಗಳು ಕಂಡು ಬಂದರೂ ಕೂಡಲೇ ಹಿರಿಯರ ಗಮನಕ್ಕೆ ತರಲಾಗುವುದು ಎಂದರು.

ಹೊಸಬರು ಪಕ್ಷಕ್ಕೆ ಸೇರ್ಪಡೆಯಾಗುವುದರಿಂದ ಈ ಪಕ್ಷ ಇನ್ನಷ್ಟು ಗಟ್ಟಿಯಾಗಲಿದ್ದು, ಸ್ಥಿರ ಸರ್ಕಾರ ರಚನೆಗೆ ಸಹಕಾರ ಆಗಲಿದೆ. ಇದರಿಂದ ದೇಶದ ಏಳ್ಗೆಯೂ ಸಾಧ್ಯವಾಗಲಿದೆ ಎಂದು ಹೇಳಿದರು.

ನಂತರ ಮೂಡಿಗೆರೆಯ ಬಿಜೆಪಿ ಮಂಡಲ ಅದ್ಯಕ್ಷ ರಘು ಜನ್ನಪುರ ಮಾತನಾಡಿ, ದೇಶವು ಕೊರೊನಾ ಸಂಕಷ್ಟದಲ್ಲಿಯೂ ವಿಶ್ವವೇ ಗಮನಿಸುವ ರೀತಿ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದ ಬಲಿಷ್ಠ ರಾಷ್ಟ್ರ ಆಗುವುದರಲ್ಲಿ ಸಂದೇಹವಿಲ್ಲ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಸಂಘಟಿಸಲು ಶ್ರಮಿಸಬೇಕು ಎಂದರು.

ನಂತರ ಪಕ್ಷಕ್ಕಾಗಿ ದುಡಿದ ಕೆಲ ಮುಖಂಡರನ್ನು ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಸನ್ಮಾನಿಸಿದರು.

ABOUT THE AUTHOR

...view details