ಚಿಕ್ಕಮಗಳೂರು:ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಶೈಲಿಯನ್ನು ಗಮನದಲ್ಲಿ ಇಟ್ಟುಕೊಂಡು, ಸಿಎಂ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಉಪಚುನಾವಣೆ ಎದುರಿಸಿ ಗೆಲ್ಲುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆಯ ಮಾತುಗಳನ್ನಾಡಿದರು.
'ಮೋದಿ ಕಾರ್ಯಶೈಲಿ, ಬಿಎಸ್ವೈ, ಬೊಮ್ಮಾಯಿ ಮಾರ್ಗದರ್ಶನದಲ್ಲಿ ಉಪಚುನಾವಣೆ ಗೆಲ್ಲುತ್ತೇವೆ' - ಕೋಟ ಶ್ರೀನಿವಾಸ ಪೂಜಾರಿ
ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಕಳೆದ ಬಾರಿ ಗೆಲುವು ಸಾಧಿಸಿದಂತೆ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
!['ಮೋದಿ ಕಾರ್ಯಶೈಲಿ, ಬಿಎಸ್ವೈ, ಬೊಮ್ಮಾಯಿ ಮಾರ್ಗದರ್ಶನದಲ್ಲಿ ಉಪಚುನಾವಣೆ ಗೆಲ್ಲುತ್ತೇವೆ' kota-srinivas-poojari-](https://etvbharatimages.akamaized.net/etvbharat/prod-images/768-512-13229070-thumbnail-3x2-kota.jpg)
ಕೋಟ ಶ್ರೀನಿವಾಸ ಪೂಜಾರಿ
ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ
ಕಳೆದ ಉಪಚುನಾವಣೆಯಂತೆ ಈ ಬಾರಿಯ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಜನಸಾಮಾನ್ಯರಂತೆ ರಸ್ತೆ ಬದಿಯಲ್ಲಿದ್ದ ಹೋಟೆಲ್ನಲ್ಲಿ ಕುಳಿತು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಜನಪ್ರಿಯ ನೀರು ದೋಸೆ ತಿನ್ನುವ ಮೂಲಕ ಸಚಿವ ಕೋಟ ಸರಳತೆ ಮೆರೆದರು.