ಕರ್ನಾಟಕ

karnataka

By

Published : Nov 8, 2022, 6:18 PM IST

ETV Bharat / state

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಲ್ ಇನ್ಸ್​ಪೆಕ್ಟರ್​​

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಠಾಣೆಯ ಸರ್ಕಲ್ ಇನ್ಸ್​ಪೆಕ್ಟರ್​ ವಸಂತ್ ಶಂಕರ್ ಭಾಗವತ್ ಅವರು ಮಸ್ತಾನ್ ಅಲಿ ಎಂಬುವವರಿಂದ ಹತ್ತು ಸಾವಿರ ರೂಪಾಯಿ ಹಣವನ್ನು ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ.

ಸರ್ಕಲ್ ಇನ್ಸ್​ಪೆಕ್ಟರ್​ ವಸಂತ್ ಶಂಕರ್ ಭಾಗವತ್
ಸರ್ಕಲ್ ಇನ್ಸ್​ಪೆಕ್ಟರ್​ ವಸಂತ್ ಶಂಕರ್ ಭಾಗವತ್

ಚಿಕ್ಕಮಗಳೂರು:ಪೊಲೀಸ್ ಅಧಿಕಾರಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ಇನ್ಸ್​​ಪೆಕ್ಟರ್​ ಅನ್ನು ಸೆರೆ ಹಿಡಿದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಠಾಣೆಯ ವಸಂತ್ ಶಂಕರ್ ಭಾಗವತ್ ಅವರು ಮಸ್ತಾನ್ ಅಲಿ ಎಂಬುವರಿಂದ ಹತ್ತು ಸಾವಿರ ರೂಪಾಯಿ ಹಣವನ್ನು ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ.

ಲೋಕಾಯುಕ್ತ ಅಧಿಕಾರಿ ಸಚಿನ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ.

ಓದಿ:ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ದ್ವಿತೀಯ ದರ್ಜೆ ಸಹಾಯಕ

ABOUT THE AUTHOR

...view details