ಕರ್ನಾಟಕ

karnataka

By

Published : Dec 20, 2019, 5:30 PM IST

ETV Bharat / state

ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಮಿನಿ ಬಸ್​: 7 ಪ್ರಯಾಣಿಕರಿಗೆ ಗಂಭೀರ ಗಾಯ

ಮಿನಿ ಬಸ್ಸೊಂದು ಹಳ್ಳಕ್ಕೆ ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮುಖ್ಯ ರಸ್ತೆಯ ಕಕ್ಕಿಂಜೆಯ ಕ್ರಾಸ್​ನಲ್ಲಿ ನಡೆದಿದೆ.

Mini Buss Accident In Chikkamagalore
ಕಂದಕಕ್ಕೆ ಉರುಳಿದ ಬಸ್​ : ಪ್ರಯಾಣಿಕರು ಸೇಫ್​

ಚಿಕ್ಕಮಗಳೂರು: ಮಿನಿ ಬಸ್ಸೊಂದು ಹಳ್ಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮುಖ್ಯ ರಸ್ತೆಯಲ್ಲಿರುವ ಕಕ್ಕಿಂಜೆಯ ಕ್ರಾಸ್ ನಲ್ಲಿ ನಡೆದಿದೆ.

ಕಂದಕಕ್ಕೆ ಉರುಳಿದ ಬಸ್​ : 7 ಪ್ರಯಾಣಿಕರಿಗೆ ಗಂಭೀರ ಗಾಯ ​

ವಿಜಯಪುರದಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಬಸ್​ ಕಕ್ಕಿಂಜೆ ಕ್ರಾಸ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಈ ಘಟನೆಯಲ್ಲಿ 7 ಜನರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದ್ದು, ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details