ಕರ್ನಾಟಕ

karnataka

By

Published : Dec 9, 2019, 5:09 PM IST

Updated : Dec 9, 2019, 5:27 PM IST

ETV Bharat / state

ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟ ಸಿಎಂ ಬಿಎಸ್​ವೈ 'ಮಾನಸ ಪುತ್ರ'

ನಾನು ಕೂಡ ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿ. ನಾನು ಯಡಿಯೂರಪ್ಪನವರ ಮನಸ್ಸಿನಲ್ಲಿದ್ದೇನೆ. ನನಗೆ ಈ ಬಾರಿ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಸಚಿವ ಸ್ಥಾನದ ಕುರಿತು ತಮ್ಮ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ.

M P kumaraswamy
ಎಂ. ಪಿ ಕುಮಾರಸ್ವಾಮಿ

ಚಿಕ್ಕಮಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕದನ ಮುಗಿಯುತ್ತಿದ್ದಂತೆಯೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಪ್ರಾಂರಭವಾಗಿದೆ. ಜಿಲ್ಲೆಯ ಮೂಡಿಗೆರೆ ಶಾಸಕ ಎಂ. ಪಿ ಕುಮಾರಸ್ವಾಮಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ತನಗೂ ಸಚಿವ ಸ್ಥಾನ ಬೇಕೆಂದು ಆಗ್ರಹಿಸಿದ್ದಾರೆ.

ಸಚಿವ ಸ್ಥಾನ ಕುರಿತು ಎಂ. ಪಿ. ಕುಮಾರಸ್ವಾಮಿ ಪ್ರತಿಕ್ರಿಯೆ

ನಾನು ಕೂಡ ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿ. ನಾನು ಸಿಎಂ ಯಡಿಯೂರಪ್ಪನವರ ಮನಸ್ಸಿನಲ್ಲಿದ್ದೇನೆ. ನನಗೂ ಈ ಬಾರಿ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ. ಕೆಲವರು ನನ್ನನ್ನು ಬಿಎಸ್​ವೈ ಅವರ ಮಾನಸ ಪುತ್ರ ಎಂದು ಹೇಳುತ್ತಾರೆ. ಆದ್ರೆ ನಿಜವಾಗಿಯೂ ನಾನು ಅವರ ಮಾನಸ ಪುತ್ರನೇ. ಎಂದಿಗೂ ಅವರು ಹಾಕಿದ ಗೆರೆಯನ್ನು ದಾಟಿಲ್ಲ. ಹಾಗಾಗಿ ಸಿಎಂ ಈ ಬಾರಿಯಾದರೂ ನನಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Last Updated : Dec 9, 2019, 5:27 PM IST

For All Latest Updates

TAGGED:

ABOUT THE AUTHOR

...view details