ಕರ್ನಾಟಕ

karnataka

ಕ್ಷುಲ್ಲಕ ಕಾರಣಕ್ಕೆ ಎಣ್ಣೆ ಅಮಲಿನಲ್ಲಿ ಅಣ್ಣನನ್ನೇ ಕೊಂದ ತಮ್ಮ!

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಉಪ್ಪಾರ ಬೀರನಹಳ್ಳಿಯ ಪಿಡಬ್ಲ್ಯುಡಿ ಕ್ವಾಟ್ರಸ್​​ನಲ್ಲಿ ತಮ್ಮನೇ ಅಣ್ಣನನ್ನು ಕೊಂದಿರುವ ಘಟನೆ ನಡೆದಿದೆ.

By

Published : May 8, 2020, 5:26 PM IST

Published : May 8, 2020, 5:26 PM IST

murder in chikkagamalore
ಎಣ್ಣೆ ಅಮಲಿನಲ್ಲಿ ಅಣ್ಣನನ್ನೇ ಕೊಂದ ಪಾಪಿ ತಮ್ಮ

ಚಿಕ್ಕಮಗಳೂರು:ಕಂಠಪೂರ್ತಿ ಎಣ್ಣೆ ಕುಡಿದು ತಮ್ಮನೇ ಅಣ್ಣನನ್ನ ಹೊಡೆದು ಕೊಂದಿರೋ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಉಪ್ಪಾರ ಬೀರನಹಳ್ಳಿಯ ಪಿಡಬ್ಲ್ಯುಡಿ ಕ್ವಾಟ್ರಸ್​​ನಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಸಹೋದರರು ಮನೆ ಮುಂದೆ ಚೌಕಬಾರ ಆಟವಾಡುತ್ತಿದ್ದಾಗ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ.

ತಮ್ಮ ಕಿರಣ್ ಅಣ್ಣ ಅರುಣ್‍ಗೆ 500 ರೂಪಾಯಿ ನೀಡಿದ್ದ. ಈ ವೇಳೆ ನನ್ನ ಹಣವನ್ನ ವಾಪಸ್ ಕೊಡು ಎಂದು ಅಣ್ಣನಿಗೆ ಕೇಳಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಇಬ್ಬರು ಸಹೋದರರ ಮಧ್ಯೆ ಗಲಾಟೆ ನಡೆದಿದೆ. ಸಹೋದರರ ಈ ಗಲಾಟೆಯಲ್ಲಿ ಕಿರಣ್ 26 ವರ್ಷದ ಅಣ್ಣ ಅರುಣ್ ಮೇಲೆ ಹಲ್ಲೆ ಮಾಡಿದ್ದಾನೆ.

ಸಹೋದರರ ಈ ಜಗಳದಲ್ಲಿ ಕೆಳಗೆ ಬಿದ್ದ ಅಣ್ಣ ಅರುಣ್ ತಲೆಗೆ ಗಂಭೀರ ಗಾಯವಾಗಿ ಪ್ರಜ್ಞೆ ತಪ್ಪಿದ್ದ. ಈ ವೇಳೆ ಕೂಡಲೇ ಅರುಣ್​​ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಅರುಣ್ ಅಸುನೀಗಿದ್ದಾನೆ.

ಲಕ್ಕವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಕಿರಣ್‍ನನ್ನ ಬಂಧಿಸಿದ್ದಾರೆ.

ABOUT THE AUTHOR

...view details