ಕರ್ನಾಟಕ

karnataka

ತರಕಾರಿ ವ್ಯಾಪಾರಸ್ಥನಿಗೆ ಸೋಂಕು ದೃಢ....ಭೌದಣಿಕೆ ಗ್ರಾಮಕ್ಕೆ ಔಷಧಿ ಸಿಂಪಡಣೆ

By

Published : Jun 24, 2020, 6:39 PM IST

ಜೂನ್ 21 ರ ಭಾನುವಾರದಂದು ಭೌದಣಿಕೆ ಗ್ರಾಮದ ತರಕಾರಿ ವ್ಯಾಪಾರಸ್ಥನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸದ್ಯ ಭೌದಣಿಕೆ ಗ್ರಾಮಕ್ಕೆ ಔಷಧಿ ಸಿಂಪಡಿಸಲಾಗುತ್ತಿದೆ.

Sanitization in chickmagaluru
Sanitization in chickmagaluru

ಚಿಕ್ಕಮಗಳೂರು: ತರಕಾರಿ ವ್ಯಾಪಾರಸ್ಥನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ, ತಾಲೂಕಿನ ಭೌದಣಿಕೆ ಗ್ರಾಮಕ್ಕೆ ಔಷಧಿ ಸಿಂಪಡಿಸಲಾಗುತ್ತಿದೆ.

ಜೂನ್ 21 ರ ಭಾನುವಾರದಂದು ಭೌದಣಿಕೆ ಗ್ರಾಮದ ತರಕಾರಿ ವ್ಯಾಪಾರಸ್ಥನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹಾಗಾಗಿ ತಹಶೀಲ್ದಾರ್ ಸೇರಿದಂತೆ ಅಧಿಕಾರಿ ವರ್ಗ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿರುವ ನೂರಕ್ಕೂ ಹೆಚ್ಚು ಮನೆಗಳಿಗೆ ಔಷಧಿ ಸಿಂಪಡಿಸಲಾಗುತ್ತಿದೆ.

ಪ್ರತೀ ಮನೆಯ ಸುತ್ತ-ಮುತ್ತ, ರಸ್ತೆ, ಜನಸಾಮಾನ್ಯರು ಕೂರುತ್ತಿದ್ದ ಕಟ್ಟೆಗಳಿಗೂ ಸೇರಿದಂತೆ ಇಡೀ ಗ್ರಾಮಕ್ಕೆ ಔಷಧಿ ಸಿಂಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಹಾಗೂ ಆತನ ಸಂಬಂಧಿಕರನ್ನ ಈಗಾಗಲೇ ಕ್ವಾರಂಟೈನ್ ಮಾಡಲಾಗಿದ್ದು, ಸೋಂಕಿತ ವಾಸವಿದ್ದ ಬೀದಿಯನ್ನು ಅಧಿಕಾರಿ ವರ್ಗ ಸೀಲ್ ಡೌನ್ ಮಾಡಿದ್ದಾರೆ.

ಇನ್ನೂ ನಗರದ ಜಯನಗರ, ಕೋಟೆ ಬಡಾವಣೆ, ಸೇರಿದಂತೆ ಹಲವು ಏರಿಯಾಗಳಲ್ಲಿ ಈ ವ್ಯಕ್ತಿ ಸಂಚಾರ ಮಾಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ABOUT THE AUTHOR

...view details