ಚಿಕ್ಕಮಗಳೂರು:ಎಲ್ಲೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿ ಗದ್ದೆಯ ಅವಧೂತ ವಿನಯ್ ಗುರೂಜಿ ಅವರು ತನ್ನ ಭಕ್ತರಿಗೆ ವಿಶೇಷ ಸಲಹೆ ನೀಡಿದ್ದಾರೆ.
ಪಾರಿಜಾತದ ಕಷಾಯ ಕೊರೊನಾ ಗುಣಪಡಿಸುವ ಔಷಧ. ಎಲ್ಲರೂ ಪಾರಿಜಾತದ ಎಲೆಯ ಕಷಾಯ ಕುಡಿಯುವಂತೆ ತಿಳಿಸಿರುವ ಆಡಿಯೋ ಚಿಕ್ಕಮಗಳೂರು ಜಿಲ್ಲಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.