ಚಿಕ್ಕಮಗಳೂರು:ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಕಬ್ಬಿಣದ ವಿಭಜಕದೊಳಗೆ ನುಗ್ಗಿದ ಪರಿಣಾಮ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗೇಟ್ ಬಳಿ ನಡೆದಿದೆ.
ನಿಯಂತ್ರಣ ತಪ್ಪಿ ಡಿವೈಡರ್ ಗೇಟ್ಗೆ ನುಗ್ಗಿದ ಪಿಕಪ್ ವಾಹನ: ಚಾಲಕ ಸ್ಥಳದಲ್ಲೇ ಸಾವು - ತರೀಕೆರೆ ತಾಲೂಕಿನ ಕುಡ್ಲೂರು
ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಡಿವೈಡರ್ ಗೇಟೋಳಗೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
![ನಿಯಂತ್ರಣ ತಪ್ಪಿ ಡಿವೈಡರ್ ಗೇಟ್ಗೆ ನುಗ್ಗಿದ ಪಿಕಪ್ ವಾಹನ: ಚಾಲಕ ಸ್ಥಳದಲ್ಲೇ ಸಾವು](https://etvbharatimages.akamaized.net/etvbharat/prod-images/768-512-4515619-thumbnail-3x2-umars.jpg)
road accident
ಮಹಮ್ಮದ್ ಆಲಿ (22) ಮೃತ ಚಾಲಕ. ರಸ್ತೆಯಲ್ಲಿ ಹೋಗುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ(ಡಿವೈಡರ್ ಗೇಟ್)ದೊಳಗೆನುಗ್ಗಿದ ಪರಿಣಾಮ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.