ಕರ್ನಾಟಕ

karnataka

ಪತಿ ಕೊಲೆಗೆ ಪತ್ನಿಯೇ ಸುಪಾರಿ ನೀಡಿರುವ ಆರೋಪ... ಹೆದ್ದಾರಿ ಮಧ್ಯೆ ಶವ ಇಟ್ಟು ಪ್ರತಿಭಟನೆ

By

Published : Feb 24, 2020, 8:04 PM IST

ಪತಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಿದ್ದಾಳೆ ಎಂದು ಆರೋಪಿಸಿ ಮೃತದೇಹವನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು.

Protesting with a corpse of Chikmagalur
ಚಿಕ್ಕಮಗಳೂರಿನ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಶವ ಇಟ್ಟು ಪ್ರತಿಭಟನೆ

ಚಿಕ್ಕಮಗಳೂರು: ಪತಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಿದ್ದಾಳೆ ಎಂದು ಆರೋಪಿಸಿ ಮೃತದೇಹವನ್ನು ರಾಷ್ಟ್ರೀಯ ಹೆದ್ದಾರಿ ಮಧ್ಯೆಯಿಟ್ಟು ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಪತ್ನಿಯೇ ಸುಪಾರಿ ನೀಡಿ ಕೊಲೆ ಮಾಡಿಸಿರುವ ಆರೋಪ... ವ್ಯಕ್ತಿಯ ಶವವನ್ನು ಹೆದ್ದಾರಿ ಮಧ್ಯೆ ಇಟ್ಟು ಪ್ರತಿಭಟನೆ

ಕಳೆದ 15 ದಿನಗಳ ಹಿಂದೆ ಬಾಳೆಹೊನ್ನೂರಿನ ರಿಚರ್ಡ್ ನರೋನ (48) ಮೇಲೆ ಮೂವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಚರ್ಡ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನರೋನ ಇಂದು ಕೊನೆಯುಸಿರೆಳೆದಿದ್ದಾರೆ. ಇದನ್ನು ಖಂಡಿಸಿ ರಿಚರ್ಡ್ ಮನೆಯ ಕುಟುಂಬ ಸದಸ್ಯರು ಹಾಗೂ ಸ್ಥಳೀಯರು ಬಾಳೆಹೊನ್ನೂರು - ಶೃಂಗೇರಿಯ ಹೆದ್ದಾರಿಯಲ್ಲಿರುವ ಶಾಂತಿಪುರದ ಬಳಿ ಮೃತದೇಹವನ್ನು ರಸ್ತೆಯ ಮಧ್ಯೆ ಇಟ್ಟು, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ರಿಚರ್ಡ್ ಪತ್ನಿ ಜಯಮಾಲ ಗಂಡನ ಕೊಲೆಗೆ ಸುಪಾರಿ ನೀಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದು, ಆಕೆಯನ್ನು ಬಂಧಿಸುವವರೆಗೂ ಮೃತದೇಹವನ್ನು ಮೇಲಕ್ಕೆ ಎತ್ತುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ರಾಜ್ಯ ಹೆದ್ದಾರಿಯ ಮಧ್ಯೆಯೇ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿದರು.

ಈಗಾಗಲೇ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ರಿಚರ್ಡ್ ಮೇಲಿನ ಹಲ್ಲೆಯ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details