ಕರ್ನಾಟಕ

karnataka

By

Published : Dec 25, 2020, 3:49 PM IST

ETV Bharat / state

ಸ್ಥಳೀಯ ವ್ಯಕ್ತಿ ಮೇಲೆ ಪಿಎಸ್ಐನಿಂದ ಹಲ್ಲೆ ಆರೋಪ: ಕ್ರಮಕ್ಕೆ ಗ್ರಾಮಸ್ಥರ ಪಟ್ಟು

ಸ್ಥಳೀಯ ವ್ಯಕ್ತಿಯೋರ್ವರ ಮೇಲೆ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಸುಖಾ ಸುಮ್ಮನೆ ಹಲ್ಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಪ್ರತಿಭಟನೆ ನಡೆಸಿದರು.

public-protests-in-front-of-sakkarayapattana-town-police-station
ಸೂಕ್ತ ಕ್ರಮಕ್ಕಾಗಿ ಪಟ್ಟು ಹಿಡಿದ ಗ್ರಾಮಸ್ಥರು

ಚಿಕ್ಕಮಗಳೂರು:ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವರ ಮೇಲೆ ಪಿಎಸ್​ಐ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಜಿಲ್ಲೆಯ ಕಡೂರು ತಾಲೂಕಿನ ಸಖರಾಯ ಪಟ್ಟಣದ ಗ್ರಾಮಸ್ಥರು ಸೂಕ್ತ ಕ್ರಮಕ್ಕಾಗಿ ಠಾಣೆಯ ಎದುರು ಪ್ರತಿಭಟಿಸಿದ್ದಾರೆ.

ಸೂಕ್ತ ಕ್ರಮಕ್ಕಾಗಿ ಪಟ್ಟು ಹಿಡಿದ ಗ್ರಾಮಸ್ಥರು

ಕಡೂರು ತಾಲೂಕಿನ ಸಖರಾಯಪಟ್ಟಣದ ದಿನೇಶ್ ಎಂಬುವರ ಮೇಲೆ‌ ಪಿಎಸ್ಐ ಹರೀಶ್ ನಾಯ್ಕ್‌ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಸ್​ಐ ಹರೀಶ್ ನಾಯ್ಕ್

ಓದಿ:ಅಟಲ್ ನಗರ ನಾಮಕರಣ : ಕಾಂಗ್ರೆಸ್ ಆರೋಪ ಸರಿಯಲ್ಲ ಎಂದ ಸಚಿವ ಜೋಶಿ

ಈ ಹಿನ್ನೆಲೆಯಲ್ಲಿ ಸಖರಾಯಪಟ್ಟಣ ಗ್ರಾಮ ಬಂದ್ ಮಾಡಿರುವ ಸ್ಥಳೀಯರು ಪೊಲೀಸ್ ಠಾಣೆ ಎದುರು ಜಮಾಯಿಸಿ ಪಿಎಸ್ಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

For All Latest Updates

ABOUT THE AUTHOR

...view details