ಚಿಕ್ಕಮಗಳೂರು:ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತೀರ್ಪು ಇಂದು ಹೊರ ಬಿದ್ದಿದೆ.
ಶೃಂಗೇರಿ ಸ್ವಾತಿ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಅತ್ಯಾಚಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಪ್ರಕರಣದ ಆರೋಪಿಗಳಾದ ಸಂತೋಷ್ ಹಾಗೂ ಪ್ರದೀಪ್ ಮೇಲಿನ ಆರೋಪ ಸಾಬೀತಾಗಿದ್ದು, ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ಪ್ರಕಟ ಮಾಡಲಾಗಿದೆ. ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿಂದ ಈ ಮಹತ್ವದ ತೀರ್ಪು ಪ್ರಕಟವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ 2016 ಫೆಬ್ರವರಿ 16 ರಂದು ಈ ಕೃತ್ಯ ನಡೆದಿತ್ತು. ಕಾಲೇಜು ಮುಗಿಸಿ ಮನೆಗೆ ಹೋಗುವಾಗ ಸ್ವಾತಿ ಎಂಬ ಯುವತಿಯನ್ನ ಅತ್ಯಾಚಾರ ಹಾಗೂ ಕೊಲೆ ಮಾಡಿ ನಂತರ ಹಾಳು ಬಾವಿಗೆ ಎಸೆದಿದ್ದರು. ಈ ಸಂಬಂಧದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಈ ಮಹತ್ವದ ತೀರ್ಪು ಪ್ರಕಟಿಸಿದೆ.