ಕರ್ನಾಟಕ

karnataka

By

Published : Jan 18, 2020, 3:00 PM IST

ETV Bharat / state

ಶೃಂಗೇರಿ ಸ್ವಾತಿ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್​​ ತೀರ್ಪು ನೀಡಿದೆ.

death
ಅತ್ಯಾಚಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಚಿಕ್ಕಮಗಳೂರು:ಶೃಂಗೇರಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತೀರ್ಪು ಇಂದು ಹೊರ ಬಿದ್ದಿದೆ.

ಪ್ರಕರಣದ ಆರೋಪಿಗಳಾದ ಸಂತೋಷ್ ಹಾಗೂ ಪ್ರದೀಪ್ ಮೇಲಿನ ಆರೋಪ ಸಾಬೀತಾಗಿದ್ದು, ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ಪ್ರಕಟ ಮಾಡಲಾಗಿದೆ. ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿಂದ ಈ ಮಹತ್ವದ ತೀರ್ಪು ಪ್ರಕಟವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ 2016 ಫೆಬ್ರವರಿ 16 ರಂದು ಈ ಕೃತ್ಯ ನಡೆದಿತ್ತು. ಕಾಲೇಜು ಮುಗಿಸಿ ಮನೆಗೆ ಹೋಗುವಾಗ ಸ್ವಾತಿ ಎಂಬ ಯುವತಿಯನ್ನ ಅತ್ಯಾಚಾರ ಹಾಗೂ ಕೊಲೆ ಮಾಡಿ ನಂತರ ಹಾಳು ಬಾವಿಗೆ ಎಸೆದಿದ್ದರು. ಈ ಸಂಬಂಧದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​ ಈ ಮಹತ್ವದ ತೀರ್ಪು ಪ್ರಕಟಿಸಿದೆ.

ABOUT THE AUTHOR

...view details