ಕರ್ನಾಟಕ

karnataka

By

Published : Nov 2, 2019, 5:20 PM IST

ETV Bharat / state

ಸಿದ್ದರಾಮಯ್ಯ ಅಂದ್ರೆನೇ ಸುಳ್ಳು: ಶೋಭಾ ಕರಂದ್ಲಾಜೆ

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮ ಯೋಜನೆಗಳೆಂದು ಹೇಳಿ ಓಡಾಡಿದ್ದು ಬಿಟ್ಟರೆ ಅವರ ಸಾಧನೆ ಏನೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Shobha karandlaje

ಚಿಕ್ಕಮಗಳೂರು:ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಸಿದ್ದರಾಮಯ್ಯನವರು ಯೋಜನೆ ನನ್ನದು ಎಂದು ಸುಳ್ಳು ಹೇಳಿಕೊಂಡು ಓಡಾಡಿದ್ದಾರೆ. ಅವರದ್ದು ಸ್ವಂತ ಸಾಧನೆ ಏನೂ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಸದೆ ಶೋಭಾ ಕರಂದ್ಲಾಜೆ

ನಗರದಲ್ಲಿ ಮಾಧ್ಯಮಗಳೊಂದೊಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಆದರೆ ಸಿದ್ದರಾಮಯ್ಯನವರು ತಮ್ಮ ಯೋಜನೆ ಎಂದು ಹೇಳಿಕೊಂಡು ಓಡಾಡಿದ್ದಾರೆ. ಸಿದ್ದರಾಮಯ್ಯ ಅಂದ್ರೆನೇ ಸುಳ್ಳು. ಎಲ್ಲಾ ಯೋಜನೆಗಳಿಗೂ ಕೇಂದ್ರ ಸರ್ಕಾರ ಹಣ ನೀಡಿದೆ. ಹಾಗಿದ್ದ ಮೇಲೆ ಸಿದ್ದರಾಮಯ್ಯ ಅವರ ಸ್ವಂತ ಸಾಧನೆ ಏನು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರನ್ನು ರಾಜಧಾನಿ ನೆನಪಿಟ್ಟುಕೊಳ್ಳಲು ಅವರು ಮಾಡಿರುವ ಒಂದು ಸಾಧನೆಯನ್ನಾದರೂ ಹೇಳಿ ನೋಡೋಣ. ಒಂದು ಜನಾಂಗಕ್ಕೆ ಒಂದು ಸಾಧನೆ ಹೇಳಲಿ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಃಪತನದಲ್ಲಿದೆ. ಇದಕ್ಕೆ ಸಿದ್ದರಾಮಯ್ಯ ಕೊಡುಗೆ ಅಪಾರವಾಗಿದ್ದು, ನಿಜಕ್ಕೂ ಅವರಿಗೆ ಅಭಿನಂದನೆ ಸಲ್ಲಿಸಬೇಕೆಂದು ವ್ಯಂಗ್ಯವಾಡಿದ್ರು.

ಸಿದ್ದರಾಮಯ್ಯ ಬ್ಲಾಕ್ ಮೇಲ್ ಮಾಡಿ ವಿರೋಧ ಪಕ್ಷದ ಸ್ಥಾನ ಗಿಟ್ಟಿಕೊಂಡಿದ್ದು, ಏನೋ ಮಾತನಾಡಬೇಕು ಅಂತಾ ಸುಮ್ಮನೆ ಮಾತನಾಡುತ್ತಾರೆ. ಹಣಕಾಸಿನ ಪರಿಸ್ಥಿತಿ ಹದಗೆಡಿಸಿ ಹೋಗಿದ್ದಾರೆ ಎಂದು ದೂರಿದರು.

ಇನ್ನು ಉಪ ಚುನಾವಣೆ ಕುರಿತು ಮಾತನಾಡಿ, ಸುಮಲತಾ ಅವರಿಗೆ ಬಿಜೆಪಿಯಿಂದ ನಾವು ಬೆಂಬಲ ಕೊಟ್ಟಿದ್ದೇವೆ. ಸುಮಲತಾ ಬೆಂಬಲ ಕೊಡುತ್ತಾರೆ ಎನ್ನುವ ವಿಶ್ವಾಸವಿದ್ದು, ನಮ್ಮನ್ನು ಬೆಂಬಲಿಸಿ ಎಂದು ನಾವು ಒತ್ತಾಯ ಮಾಡೋ ಪ್ರಶ್ನೆಯೇ ಇಲ್ಲ. ಏಕೆಂದರೆ ಅವರೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ನನ್ನ ಬೆಂಬಲ ಅಂತ ಹೇಳಿದ್ದಾರೆ. ಈಗ ಏನು ಬದಲಾವಣೆ ಆಗಿದ್ಯೋ ಗೊತ್ತಿಲ್ಲ ಎಂದರು.

ABOUT THE AUTHOR

...view details