ಚಿಕ್ಕಮಗಳೂರು:ಜಿಲ್ಲೆಯ ಕಡೂರು ತಾಲೂಕಿನಲ್ಲಿ ಜೆಡಿಎಸ್ಗೆ ವೈಎಸ್ವಿ ದತ್ತ ಗುಡ್ ಬೈ ಹೇಳ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಎಪಿಎಂಸಿ ಮಾಜಿ ಅಧ್ಯಕ್ಷ, ದತ್ತರ ಆಪ್ತರ ಆಡಿಯೋ ಒಂದು ವೈರಲ್ ಆಗುತ್ತಿದ್ದು ಇದರಲ್ಲಿ ಪಕ್ಷ ಬಿಡುವ ಬಗ್ಗೆ ಸಂಭಾಷಣೆ ಆಗಿದೆ ಎನ್ನಲಾಗಿದೆ.
ದತ್ತ ಕಾಂಗ್ರೆಸ್ ಸೇರುವುದರಿಂದ ಕೈ ಪಾಳೆಯದಲ್ಲಿ ಮೂಲ ಮತ್ತು ವಲಸಿಗರ ಕಲಹ ಆರಂಭವಾಗುವುದಂತೂ ಖಂಡಿತಾ. ದತ್ತ ಅವರು ನಾಳೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸೇರ್ಪಡೆ ಬಗ್ಗೆ ಚರ್ಚೆ ಮಾಡಲಿದ್ದು, ಇದೇ ತಿಂಗಳ 17 ರಂದು ಬೆಳ್ತಂಗಡಿಯಲ್ಲಿ ಸಿದ್ದು ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.