ಕರ್ನಾಟಕ

karnataka

ETV Bharat / state

ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮಹಿಳೆ ಸಾವು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಕೊಳೂರಿನಲ್ಲಿ ಮಹಿಳೆಯೊಬ್ಬಳು ಬಟ್ಟೆ ತೊಳೆಯಲು ಹೋಗಿ ಸಾವನ್ನಪ್ಪಿದ್ದಾಳೆ.

By

Published : Mar 21, 2019, 10:06 AM IST

ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಜಯಪುರದ ಕೊಳೂರಿನಲ್ಲಿ ಮಹಿಳೆ ಸಾವು

ಚಿಕ್ಕಮಗಳೂರು:ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಕೊಳೂರಿನಲ್ಲಿ ನಡೆದಿದೆ.

ಮಹಿಳೆ ನದಿಯಲ್ಲಿ ಕಾಲು ಜಾರಿನದಿಗೆ ಬಿದ್ದಿರುವುದಾಗಿ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದ್ದು, ಪೊಲೀಸರು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.ಸಾವಿಗೀಡಾಗಿರುವ ಮಹಿಳೆ ಮೂರ್ಛೆ ರೋಗದಿಂದಬಳಲುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.

ABOUT THE AUTHOR

...view details