ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತ ಸಂಭವಿಸಿದ್ದು, ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಟ್ರ್ಯಾಕ್ಟರ್ - ಬೈಕ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು - ಅಜ್ಜಂಪುರದಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ಅಪಘಾತ
ಅಡಿಕೆ ತುಂಬಿದ ಟ್ರ್ಯಾಕ್ಟರ್ ಬೈಕ್ಗೆ ಗುದ್ದಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬಳಿ ನಡೆದಿದೆ.

Tractor, bike accident,ಟ್ರ್ಯಾಕ್ಟರ್ ಮತ್ತು ಬೈಕ್ ಅಪಘಾತ,
ಮಹೇಶ್ (25), ಮೌನೇಶ್ (26) ಮೃತ ದುರ್ದೈವಿಗಳು. ಅಜ್ಜಂಪುರದ ಬಾಣೂರು ಗ್ರಾಮದಿಂದ ಮೃತ ವ್ಯಕ್ತಿಗಳು ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಅಡಿಕೆ ತುಂಬಿದ ಟ್ರ್ಯಾಕ್ಟರ್ ಬೈಕ್ಗೆ ಗುದ್ದಿದೆ. ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ನಡೆದ ಸ್ಥಳದಿಂದ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.