ಕರ್ನಾಟಕ

karnataka

By

Published : Mar 13, 2022, 2:29 PM IST

ETV Bharat / state

ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೈಕ್ ಕಂದಕಕ್ಕೆ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಉರಿದಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ..

ಕಾರು ಮತ್ತು ಬೈಕ್ ನಡುವೆ ಡಿಕ್ಕಿ
ಕಾರು ಮತ್ತು ಬೈಕ್ ನಡುವೆ ಡಿಕ್ಕಿ

ಚಿಕ್ಕಮಗಳೂರು: ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಕಡೂರು ತಾಲೂಕಿನ ಬೀರೂರು ಕಾರೇಹಳ್ಳಿ ಮೂಲದ ಆನಂದ್ (35) ಮತ್ತು ಲಕ್ಷ್ಮಿ(33) ಎಂಬುವರು ಮೃತ ದಂಪತಿ. ಗಂಡ-ಹೆಂಡತಿ ಬೈಕ್​ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಘಟನೆ‌ ಸಂಭವಿಸಿದೆ. ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಮೇಲೆ ಅಪಘಾತ‌ ನಡೆದಿದ್ದು, ಕಾರು ಡಿಕ್ಕಿಯಾಗುತ್ತಿದ್ದಂತೆ ಬೈಕ್ ಕಂದಕಕ್ಕೆ ಬಿದ್ದಿದೆ.

ಚಿಕ್ಕಮಗಳೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ..

ಬೈಕ್ ಕಂದಕಕ್ಕೆ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಉರಿದಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿದ್ದ 81 ಮಂದಿಗೆ ಸೌದಿಯಲ್ಲಿ ಏಕಕಾಲಕ್ಕೆ ಮರಣದಂಡನೆ

ABOUT THE AUTHOR

...view details