ಕರ್ನಾಟಕ

karnataka

ETV Bharat / state

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗ್ರಾಮಸ್ಥರ ಆಕ್ರೋಶ!

ಶಾಲಾ ಮಕ್ಕಳಿಗೆ ಆನ್​ಲೈನ್​ ಶಿಕ್ಷಣ ನಡೆಯುತ್ತಿದ್ದು, ಸರಿಯಾದ ನೆಟ್​ವರ್ಕ್​ ಇಲ್ಲದೆ ಸೂಕ್ತ ಶಿಕ್ಷಣ ದೊರಕುತ್ತಿಲ್ಲ. ಈ ಸಮಸ್ಯೆಯನ್ನು ಬಗೆಹರಿಸಿ ಎಂದು ಗ್ರಾಮಸ್ಥರು ಸಂಸದೆ ಶೋಭಾ ಕರಂದ್ಲಾಜೆ ಬಳಿ ಮನವಿ ಮಾಡಿದಾಗ ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

By

Published : Dec 16, 2020, 4:10 PM IST

villagers outraged against Shobha  at Jambala village in Moodigere taluk
ಪಂಚಾಯಿತಿ ಚುನಾವಣೆ ಪ್ರಚಾರಕ್ಕೆ ತೆರಳಿದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಗ್ರಾಮಸ್ಥರ ಕಿಡಿ

ಚಿಕ್ಕಮಗಳೂರು: ಗ್ರಾಮ ಪಂಚಾಯತ್​​ ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾಂಬಳೆ ಗ್ರಾಮದ ಜನರೊಂದಿಗೆ ಮಾತನಾಡುತ್ತಿದ್ದ ಸಂಸದೆ ಶೋಭಾ ಕರಂದ್ಲಾಜೆ, ಮೊಬೈಲ್ ನೆಟ್​ವರ್ಕ್​ ಸಮಸ್ಯೆ ಬಗೆಹರಿಸುವ ಕುರಿತು ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡುವಲ್ಲಿ ವಿಫಲರಾದಾಗ ರೊಚ್ಚಿಗೆದ್ದ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗ್ರಾಮಸ್ಥರ ಕಿಡಿ

ಓದಿ:ಜೆಡಿಎಸ್​ ಎಂಬ ಮಗು ಮಿಠಾಯಿ ತೋರಿಸಿದವರ ಕಡೆ ಹೋಗುತ್ತೆ: ಹೆಚ್​.ವಿಶ್ವನಾಥ್

ಜೊತೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯನ್ನು ಗ್ರಾಮಸ್ಥರು ಪ್ರಶ್ನೆ ಮಾಡಿದ್ದು, ಈ ವೇಳೆ ಬಿಜೆಪಿ ಮುಖಂಡರು-ಸ್ಥಳೀಯರ ನಡುವೆ ಜಟಾಪಟಿ ನಡೆದಿದೆ. ಹಲವು ವರ್ಷಗಳಿಂದ ಕುದುರೆಮುಖ, ಜಾಂಬಳೆ, ಕೆಂಕನಕೊಂಡ, ಬಿಳಗಲ್, ನೆಲ್ಲಿಬೀಡಲ್ಲಿ ನೆಟ್​ವರ್ಕ್ ಸಮಸ್ಯೆ ಎದುರಾಗಿದೆ. ಶಾಲಾ ಮಕ್ಕಳಿಗೆ ಆನ್​​ಲೈನ್ ಶಿಕ್ಷಣ ನಡೆಯುತ್ತಿದ್ದು, ಸರಿಯಾದ ನೆಟ್​ವರ್ಕ್​ ಇಲ್ಲದೇ ಸರಿಯಾದ ಶಿಕ್ಷಣ ದೊರಕುತ್ತಿಲ್ಲ. ಈ ಸಮಸ್ಯೆ ಬಗೆಹರಿಸಿ ಎಂದು ಗ್ರಾಮಸ್ಥರು ಸಂಸದೆ ಬಳಿ ಮನವಿ ಮಾಡಿದಾಗ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ.

For All Latest Updates

TAGGED:

ABOUT THE AUTHOR

...view details