ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೇಮಾವತಿ ನದಿಯಲ್ಲಿ ಕಡಿದಾಳು ಗ್ರಾಮದ ದೇವಮ್ಮ (55) ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು: ಹೇಮಾವತಿ ನದಿಯಲ್ಲಿ ಮುಳುಗಿ ಮಹಿಳೆ ಸಾವು - Woman drowns in River Hemavathi
ಚಿಕ್ಕಮಗಳೂರು ಜಿಲ್ಲೆಯ ಹೇಮಾವತಿ ನದಿಯಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
![ಚಿಕ್ಕಮಗಳೂರು: ಹೇಮಾವತಿ ನದಿಯಲ್ಲಿ ಮುಳುಗಿ ಮಹಿಳೆ ಸಾವು dsd](https://etvbharatimages.akamaized.net/etvbharat/prod-images/768-512-8412292-thumbnail-3x2-vish.jpg)
ಹೇಮಾವತಿ ನದಿಯಲ್ಲಿ ಮುಳುಗಿ ಮಹಿಳೆ ಸಾವು
ಹೇಮಾವತಿ ನದಿಯಲ್ಲಿ ಮುಳುಗಿ ಮಹಿಳೆ ಸಾವು
ಗದ್ದೆಗೆ ಹೋಗುವಾಗ ಈ ದುರಂತ ನಡೆದಿದ್ದು, ಸುಮಾರು ಎರಡು ಕಿಲೋಮೀಟರ್ ದೂರದಲ್ಲಿ ದೇವಮ್ಮ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾಮಳೆಗೆ ಜಿಲ್ಲೆಯಲ್ಲಿ ಇದು ಆರನೇ ಬಲಿಯಾಗಿದ್ದು, ಧಾರಾಕಾರ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಎರಡು ದಿನಗಳಿಂದ ಜಿಲ್ಲೆಯಲ್ಲಿ ವರುಣ ಬಿಡುವು ನೀಡಿದ್ದರೂ ಜಿಲ್ಲೆಯಲ್ಲಿ ನದಿಗಳು ಧುಮ್ಮಿಕ್ಕಿ ಹರಿಯುತ್ತಿವೆ.