ಕರ್ನಾಟಕ

karnataka

ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾಯ್ತು ಪ್ಲಾಸ್ಟಿಕ್​ ಕೊಡಪಾನ ಫ್ಯಾಕ್ಟರಿ

ಚಿತ್ರದುರ್ಗ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ವೆಂಕಟೇಶ್ವರ ಪ್ಲಾಸ್ಟಿಕ್ ಫ್ಯಾಕ್ಟರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

By

Published : Mar 14, 2019, 6:22 PM IST

Published : Mar 14, 2019, 6:22 PM IST

ಚಿತ್ರದುರ್ಗ ದಲ್ಲಿ ಬೆಂಕಿಗೆ ಆಹುತಿಯಾದ ವೆಂಕಟೇಶ್ವರ ಪ್ಲಾಸ್ಟಿಕ್ ಫ್ಯಾಕ್ಟರಿ

ಚಿತ್ರದುರ್ಗ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಪ್ಲಾಸ್ಟಿಕ್ ಕೊಡಪಾನದ ಫ್ಯಾಕ್ಟರಿ ಸುಟ್ಟು ಭಸ್ಮಾವಾಗಿರುವ ಘಟನೆ ಚಿತ್ರದುರ್ಗ ನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ವೆಂಕಟೇಶ್ವರ ಪ್ಲಾಸ್ಟಿಕ್ ಫ್ಯಾಕ್ಟರಿ ಇದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿ ಹಾಗೂ ಗೋಡೌನ್​ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಆಹುತಿಯಾಗಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗ ದಲ್ಲಿ ಬೆಂಕಿಗೆ ಆಹುತಿಯಾದ ವೆಂಕಟೇಶ್ವರ ಪ್ಲಾಸ್ಟಿಕ್ ಫ್ಯಾಕ್ಟರಿ

ಕೊನೆಗೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಸಂಬಂಧ ಬಡಾವಣೆ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details