ಕರ್ನಾಟಕ

karnataka

ಲ್ಯಾಪ್‌ಟಾಪ್ ವಿತರಿಸುವಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

By

Published : Jan 14, 2020, 7:08 PM IST

ಎಲ್ಲಾ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸುವಂತೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಇಂದು ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ.

protest
ಪ್ರತಿಭಟನೆ

ಚಿತ್ರದುರ್ಗ:ಮಾಜಿ‌ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮವನ್ನು ಬಿಎಸ್​ವೈ ಸರ್ಕಾರ ತಡೆ ಹಿಡಿದಂತೆ ಕಾಣಿಸಿದ ಬೆನ್ನಲ್ಲೇ ಇದೀಗ ಎಲ್ಲಾ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸುವಂತೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಬೀದಿಗಿಳಿದು ಪ್ರತಿಭಟಿಸಿದೆ.

ವಿದ್ಯಾರ್ಥಿಗಳಿಂದ ಪ್ರತಿಭಟನೆ

ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳ ರಾಜ್ಯ ಸರ್ಕಾರ ವಿರುದ್ಧ ಲ್ಯಾಪ್‌ಟಾಪ್​ಗಾಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಸಿಎಂ ಬಿಎಸ್​ವೈ ವಿರುದ್ಧ ಧಿಕ್ಕಾರ ಹಾಕುವ ಮೂಲಕ ಕೂಡಲೇ ಎಲ್ಲಾ ಪದವಿ ವಿಧ್ಯಾರ್ಥಿಗಳಿಗೂ ಲ್ಯಾಪ್ ಟ್ಯಾಪ್ ನೀಡಿ ಎಂದು ಒತ್ತಾಯಿಸಿದ್ದಾರೆ.

ABOUT THE AUTHOR

...view details