ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ಬಿಜೆಪಿ ಸೋಲಿಸಲು ಭೋವಿ ಸಮುದಾಯ ತೀರ್ಮಾನ

ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಇದೇ 18 ಕ್ಕೆ ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ ಇಡೀ ಭೋವಿ, ಕೊರಚ, ಕೊರಮ, ಲಂಬಾಣಿ ಸಮುದಾಯದವರು ಸೇರಿದಂತೆ 99 ಉಪ ಸಮುದಾಯಗಳು ಕಾಂಗ್ರೆಸ್​ಗೆ ಮತ ಚಲಾಯಿಸಲು ನಿರ್ಧರಿಸಿವೆ.

By

Published : Apr 2, 2019, 3:04 PM IST

ತೀರ್ಮಾನ

ಚಿತ್ರದುರ್ಗ: ಭೋವಿ ಸಮುದಾಯದಿಂದ ಬಿಜೆಪಿ ಅಭ್ಯರ್ಥಿ ಎ.ನಾರಾಯಣ ಸ್ವಾಮಿಯನ್ನು ಬೆಂಬಲಿಸಬೇಕೋ ಬೇಡವೋ ಎಂಬ ನಿರ್ಣಾಯಕ ಸಭೆಯನ್ನು ನಡೆಸಲಾಯಿತು.

ಈ ಸಭೆಯಲ್ಲಿ ಇದೇ 18ಕ್ಕೆ ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ ಇಡೀ ಭೋವಿ, ಕೊರಚ, ಕೊರಮ, ಲಂಬಾಣಿ ಸಮುದಾಯದವರು ಸೇರಿದಂತೆ 99 ಉಪ ಸಮುದಾಯಗಳು ಕಾಂಗ್ರೆಸ್​ಗೆ ಮತ ಚಲಾಯಿಸಲು ನಿರ್ಧರಿಸಿವೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಹಾಗೂ ಭೋವಿ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

ನಗರದ ವಿದ್ಯಾ ನಗರದಲ್ಲಿ ನಡೆದಂತಹ ಗೌಪ್ಯ ಸಭೆಯಲ್ಲಿ ಸದಾಶಿವ ಆಯೋಗದ ವಿರುದ್ಧ ಇದ್ದ ಬಿಜೆಪಿ ಅಭ್ಯರ್ಥಿ ಆನೇಕಲ್ ನಾರಾಯಣ ಸ್ವಾಮಿಯನ್ನು ಸೋಲಿಸಿಯೇ ತೀರುತ್ತೇವೆ ಎಂದು ಭೋವಿ ಸಮುದಾಯ ಪಣ ತೊಟ್ಟಿದೆ.

ABOUT THE AUTHOR

...view details