ಚಿತ್ರದುರ್ಗ:ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಿರಿಗೆರೆ ಗ್ರಾಮದ ಬಳಿ ನಡೆದಿದೆ.
ಸಿರಿಗೆರೆ ಬಳಿ ಖಾಸಗಿ ಬಸ್ ಮತ್ತು ಬೈಕ್ ಅಪಘಾತ: ಓರ್ವ ಸ್ಥಳದಲ್ಲೇ ಸಾವು
ಸಿರಿಗೆರೆ, ಬಸವಪಟ್ಟಣ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಸಿರಿಗೆರೆ ಉಪಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಬಸ್ ಮತ್ತು ಬೈಕ್ ಅಪಘಾತ
ಮೃತ ವ್ಯಕ್ತಿಯನ್ನು ಕಳಸಪ್ಪ ಎಂದು ಗುರುತಿಸಲಾಗಿದೆ. ಸಿರಿಗೆರೆ, ಬಸವಪಟ್ಟಣ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ವಿಳಾಸ ಪತ್ತೆಯಾಗಿಲ್ಲ. ಸಿರಿಗೆರೆ ಉಪಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.