ಚಿತ್ರದುರ್ಗ:ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ನಗರದ ಹೊರವಲಯದ ಕುಂಚಿಗನಾಳು ಬಳಿ ನಡೆದಿದೆ.
ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ - KN_CTD_04_ACCIDENT_4 DEATH_AV_7204336_01
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದ ಹೊರವಲಯದಲ್ಲಿ ನಡೆದಿದೆ.
![ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ](https://etvbharatimages.akamaized.net/etvbharat/prod-images/768-512-3865970-thumbnail-3x2-sow.jpg)
ಭೀಕರ ರಸ್ತೆಅಪಘಾತ ಸ್ಥಳದಲ್ಲೇ ನಾಲ್ವರ ದಾರುಣ ಸಾವು : ಮೂವರ ಸ್ಥಿತಿ ಗಂಭೀರ
ಭೀಕರ ರಸ್ತೆಅಪಘಾತ: ಸ್ಥಳದಲ್ಲೇ ನಾಲ್ವರ ಸಾವು
ಕಾರಿನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ಓರ್ವ ಚಾಲಕ ಸೇರಿ ಒಟ್ಟು ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇನ್ನು ಇಬ್ಬರು ಮಹಿಳೆಯರು ಹಾಗೂ ನಾಲ್ಕು ವರ್ಷದ ಮಗುವಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲೇ ಸಾವನ್ನಪ್ಪಿದ್ದವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಘಟನಾ ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ನಡೆದಿರುವ ಶಂಕೆ ಕೂಡ ವ್ಯಕ್ತವಾಗಿದೆ.