ಚಿತ್ರದುರ್ಗ: ಜೋಗಿಮಟ್ಟಿ ವನ್ಯಜೀವಿ ಧಾಮವನ್ನು ವೀಕ್ಷಿಸಲು ವರ್ಷವಿಡೀ ಸಾವಿರಾರು ಪ್ರವಾಸಿಗರ ದಂಡು ಹರಿದುಬರುತ್ತೆ. ಅದ್ರೆ, ಈ ಪ್ರವಾಸಿ ತಾಣದ ಅಭಿವೃದ್ಧಿಗೆ ಸರ್ಕಾರ ಸೂಕ್ತ ಅನುದಾನ ನೀಡುತ್ತಿಲ್ಲ. ಜೋಗಿಮಟ್ಟಿ ವನ್ಯಜೀವಿ ಧಾಮದ ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ.
ಜೋಗಿಮಟ್ಟಿ ಅರಣ್ಯ ಪ್ರದೇಶಲ್ಲಿ ನೂರಾರು ಕಾಡು ಪ್ರಾಣಿಗಳು ವಾಸ ಮಾಡುತ್ತಿವೆ. ಪಕ್ಕದಲ್ಲಿ ವನ್ಯಜೀವಿ ಧಾಮ ಅರಣ್ಯ ಇಲಾಖೆ ನಿರ್ಮಾಣ ಮಾಡಲಾಗಿದೆ. ಆದ್ರೆ ಧಾಮದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗುತ್ತಿದೆ ಎಂಬ ಆರೋಪಗಳು ಪರಿಸರ ಪ್ರೇಮಿಗಳಿಂದ ಕೇಳಿಬಂದಿದೆ.
ಸ್ಥಳೀಯರು ಹೇಳೋದೇನು?
ಬರದ ನಾಡಿನಲ್ಲಿ ಮಲೆನಾಡಿನ ಅನುಭವ ನೀಡುವ ಜೋಗಿಮಟ್ಟಿ ವನ್ಯಜೀವಿ ಧಾಮಕ್ಕೆ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ, ಅಭಿವೃದ್ಧಿಪಡಿಸಬೇಕು ಎಂಬ ಕೂಗು ಮೊದಲಿನಿಂದಲೂ ಇದೆ. ಪ್ರತಿ ವರ್ಷ ಅಭಿವೃದ್ಧಿಗೆ ಕೇವಲ 2-3 ಕೋಟಿ ರೂ. ಹಣ ಕೊಟ್ಟು ಸರ್ಕಾರ ಕೈ ತೊಳೆದುಕೊಳ್ಳುತ್ತಿದೆ ಎಂದು ಕೋಟೆನಾಡಿನ ಜನತೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.