ಚಿತ್ರದುರ್ಗ:ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ವಿರುದ್ಧ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಿಎಎ-ಎನ್ಆರ್ಸಿ ಕಾಯ್ದೆ ವಿರೋಧಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ವಿರುದ್ಧ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಿಎಎ ಹಾಗೂ ಎನ್ಆರ್ಸಿ ಕಾಯ್ದೆ ವಿರೋಧಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ
ಪ್ರತಿಭಟನೆಯಲ್ಲಿ ಜನ್ರು ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಕಾಯ್ದೆಗಳು ಸಂವಿಧಾನ ವಿರೋಧಿಯಾಗಿರುವುದರಿಂದ ತಕ್ಷಣ ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನ ಆಪತ್ತಿನಲ್ಲಿದ್ದು, ಸಂವಿಧಾನಕ್ಕೆ ಮಾರಕವಾಗಿರುವ ಕಾಯ್ದೆಗಳನ್ನು ತಕ್ಷಣ ಕೈಬಿಡಬೇಕೆಂದು ಆಗ್ರಹಿಸಿದರು.