ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು, ಏಳು ಮಂದಿಗೆ ಗಾಯ - ಅರಸೀಕೆರೆ

ಚಿತ್ರದುರ್ಗದಲ್ಲಿ ನಡೆದ ಶೋಭಯಾತ್ರೆ ಮುಗಿಸಿ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದರೆ, ಏಳು ಮಂದಿ ಗಾಯಗೊಂಡಿದ್ದಾರೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತ

By

Published : Sep 22, 2019, 8:38 AM IST

ಚಿತ್ರದುರ್ಗ: ಕಾರು - ಕ್ರೂಸರ್​ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 7 ಮಂದಿ ಗಾಯಗೊಂಡಿರುವ ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗದಲ್ಲಿ ನಡೆದ ಶೋಭಯಾತ್ರೆ ಮುಗಿಸಿ ಹಿಂದಿರುಗುತ್ತಿದ್ದಾಗ ಇಂದು ಬೆಳಗಿನಜಾವ ಈ ಅಪಘಾತ ಸಂಭವಿಸಿದೆ. ಕ್ರೂಸರ್​ನಲ್ಲಿದ್ದ ಹಾಸನ ಜಿಲ್ಲೆ ಅರಸೀಕೆರೆ ಮೂಲದ ಲೋಕೇಶ್​ ಸಾವನ್ನಪ್ಪಿದ್ದರೆ, ಇತ್ತ ಹೊಸದುರ್ಗದಿಂದ ಬರುತ್ತಿದ್ದ ಕಾರಿನಲ್ಲಿದ್ದ ಅರಸೀಕೆರೆ ಮೂಲದ ಗೌತಮ್ ಸಿಂಗ್, ಮದನ್ ಸಿಂಗ್, ಮುಖೇಶ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ ಏಳು ಜನರಿಗೆ ಗಾಯಗಳಾಗಿದ್ದು, ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸದುರ್ಗ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ABOUT THE AUTHOR

...view details