ಕರ್ನಾಟಕ

karnataka

ETV Bharat / state

ವಿದ್ಯುತ್​ ತಗುಲಿ ವ್ಯಕ್ತಿ ಸಾವು : ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ನಿರ್ಮಾಣ ಹಂತದ ಕಟ್ಟಡಕ್ಕೆ ನೀರುಣಿಸುತ್ತಿದ್ದ ವೇಳೆ ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲೂಕಿನ ವೀರದಿಮ್ಮನಹಳ್ಳಿಯಲ್ಲಿ ನಡೆದಿದೆ. ಈ ನಡುವೆ ಮೃತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

By

Published : May 20, 2019, 5:58 PM IST

ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವು

ಚಿತ್ರದುರ್ಗ: ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ವೀರ ದಿಮ್ಮನಹಳ್ಳಿಯಲ್ಲಿ ನಡೆದಿದೆ.

ವೀರದಿಮ್ಮನಹಳ್ಳಿ ಗ್ರಾಮದ ತಾವರೆ ನಾಯಕ (58) ಮೃತ ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದೆ. ನಿರ್ಮಾಣ ಹಂತದ ಕಟ್ಟಡಕ್ಕೆ ನೀರು ಹಾಯಿಸುತ್ತಿದ್ದ ವೇಳೆ, ಈ ಅವಘಡ ಸಂಭವಿಸಿದೆ. ಈ ನಡುವೆ ಗಾಯಾಳು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾನೆ ಎನ್ನಲಾಗುತ್ತಿದೆ. ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು. ಚಳ್ಳಕೆರೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್​ ತಂತಿ ತಗುಲಿ ಕೂಲಿ ಕಾರ್ಮಿಕ ಸಾವು

ABOUT THE AUTHOR

...view details