ಕರ್ನಾಟಕ

karnataka

By

Published : Jul 16, 2020, 4:27 PM IST

ETV Bharat / state

ಚಿತ್ರದುರ್ಗ ನಗರ ಲಾಕ್​​ಡೌನ್ ಮಾಡಲು ಚಿಂತನೆ

ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಲಾಕ್​​​ಡೌನ್ ಸಂಬಂಧ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಎಲ್ಲಾ ವ್ಯಾಪಾರ ಸಂಘ ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲು ಸಭೆ ಕರೆದಿದ್ದರು.

Meeting of Merchants
ವ್ಯಾಪರಸ್ಥರ ಸಭೆ

ಚಿತ್ರದುರ್ಗ: ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಲಾಕ್​​ಡೌನ್ ಮಾಡಲಾಗಿದೆ. ಹಾಗೆಯೇ ಚಿತ್ರದುರ್ಗ ತಾಲೂಕನ್ನೂ ಲಾಕ್​​​ಡೌನ್ ಮಾಡಲು ಚಿಂತನೆ ನಡೆದಿದೆ.

ಲಾಕ್​​​ಡೌನ್ ಸಂಬಂಧ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನಗರದ ಪ್ರವಾಸಿ ಮಂದಿರದಲ್ಲಿ ಎಲ್ಲಾ ವ್ಯಾಪಾರ ಸಂಘ ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸಲು ಸಭೆ ಕರೆದಿದ್ದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವ್ಯಾಪಾರಸ್ಥರಿಂದ ಲಾಕ್​​ಡೌನ್ ಮಾಡಬೇಕೋ, ಬೇಡವೋ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು.

ವ್ಯಾಪಾರಸ್ಥರ ಸಭೆ

ಸಭೆಯಲ್ಲಿ 50ಕ್ಕೂ ಹೆಚ್ಚು ವಿವಿಧ ಸಂಘಗಳು ಹಾಗೂ ನೂರಕ್ಕೂ ಹೆಚ್ಚು ವ್ಯಾಪಾರಸ್ಥರು ಭಾಗಿಯಾಗಿದ್ದರು. ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ ಐದರ ತನಕ ಪ್ರತಿದಿನ ಲಾಕ್​ಡೌನ್ ಮಾಡುವಂತೆ ಶಾಸಕರಿಗೆ ತಮ್ಮ ಅಭಿಪ್ರಾಯ ತಿಳಿಸಿದರು. ಅಭಿಪ್ರಾಯ ಸಂಗ್ರಹಿಸಿದ ತಿಪ್ಪಾರೆಡ್ಡಿ, ಜಿಲ್ಲಾಡಳಿತ ಸೇರಿದಂತೆ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ABOUT THE AUTHOR

...view details