ಚಿತ್ರದುರ್ಗ: ಸಿಎಂ ಕುರ್ಚಿಗೆ ಹಾರಬೇಕು ಎಂದು ಸಿದ್ದರಾಮಯ್ಯ ಅನ್ಕೊಂಡಿದ್ದಾರೆ. ಆದ್ರೆ ಅವ್ರ ಕಾಲನ್ನ ಡಿಕೆಶಿ ಎಳೆಯುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ರಾಮುಲು ಲೇವಡಿ ಮಾಡಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಎಲ್ಲರೂ ಮ್ಯೂಸಿಕಲ್ ಚೇರ್ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಇಬ್ಬರೂ ಸಿಎಂ ಆಗಬೇಕು ಅಂದುಕೊಂಡಿದ್ದಾರೆ. ರಾಜ್ಯದ ಜನತೆಗಾಗಿ ಅಭಿವೃದ್ಧಿ ಕೆಲಸ ಮಾಡುವವರು ನಾವು, ಆದ್ರೆ ಸಿಎಂ ಕುರ್ಚಿಗಾಗಿ ಕೆಲಸ ಮಾಡುವವರು ಕಾಂಗ್ರೆಸ್ ಪಕ್ಷದ ನಾಯಕರು. ಅವರಿಗೂ ನಮಗೂ ಬಹಳ ವ್ಯತ್ಯಾಸವಿದೆ. ವಿರೋಧ ಪಕ್ಷದವರಿಗೆ ಮಾಡಲು ಕೆಲಸವಿಲ್ಲ, ಅದ್ಕೆ ಸಿಎಂ ಕುರ್ಚಿ ಮೇಲೆ ಕಣ್ಣು ಹಾಕಿಕೊಂಡು ಕೂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.