ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಯರಬಳ್ಳಿ ಗ್ರಾಮದಲ್ಲಿ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂಬ ಗುಟ್ಟು ರಟ್ಟಾಗಿಸಿದ್ದಾರೆ.
ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯ ನಮಗೂ ಇದೆ: ಶಾಸಕಿ ಪೂರ್ಣಿಮಾ ಶ್ರೀನಿವಾಸ್
ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಸಚಿವೆಯಾಗುವ ಹಂಬಲ ವ್ಯಕ್ತಪಡಿಸಿದ್ದಾರೆ.
ಯರಬಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಪ್ರತಿಕ್ರಿಯಿಸಿದ ಅವರು ಮಹಿಳಾ ಪ್ರಾತಿನಿಧ್ಯದ ಮಾತು ಬಾಯಿ ಮಾತಿಗೆ ಸೀಮಿತ ಆಗುತ್ತಿದ್ದು, ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯ ನಮಗೂ ಇದೆ ಎಂದು ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂಬ ಗುಟ್ಟನ್ನು ಬಿಟ್ಟುಕೊಟ್ಟರು.
ಯಾದವ ಸಮುದಾಯದ ಏಕೈಕ ಶಾಸಕಿ ಆಗಿದ್ದು, ಸಚಿವ ಸ್ಥಾನಕ್ಕೆ ಪರಿಗಣಿಸಲು ಮನವಿ ಮಾಡುವೆ. ಶಶಿಕಲಾ ಜೊಲ್ಲೆ ಅವರನ್ನು ತೆಗೆದು ನನಗೆ ಮಂತ್ರಿಗಿರಿ ಕೊಡಿ ಅನ್ನಲ್ಲ ಬದಲಾಗಿ ಸಚಿವ ಸಂಪುಟದಲ್ಲಿ ಇಬ್ಬರು ಮಹಿಳೆಯರಿಗೆ ಸ್ಥಾನ ಕೊಟ್ಟರೆ ಕಷ್ಟವೇನೂ ಆಗಲ್ಲ. ಪಕ್ಷದ ಶಿಸ್ತಿಗೆ ತಲೆಬಾಗುತ್ತೇನೆ, ಪಕ್ಷದ ತೀರ್ಮಾನಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಅಭಿಪ್ರಾಯ ತಿಳಿಸಿದರು.