ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಪಟ್ಟಣ ಪಂಚಾಯತ್ನ ಆವರಣದಲ್ಲಿ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಯ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಶ್ರೀರಾಮುಲು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಭಾಗಿಯಾಗುವ ಮೂಲಕ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಗಾಳಿಗೆ ತೂರಿದರು.
ಸರ್ಕಾರಿ ಕಾರ್ಯಕ್ರಮದಲ್ಲಿ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳೇ ಮಾಯ
ಕಂದಾಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ಅಕ್ರಮ ಸಕ್ರಮ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಶ್ರೀರಾಮುಲು ಅಭಿಮಾನಿಗಳಾದ ಜಯಪಾಲಯ್ಯ, ರಾಮರೆಡ್ಡಿ ಭಾಗಿಯಾಗಿದ್ದರು..
ಹಕ್ಕು ಪತ್ರ ವಿತರಣೆ ಕಾರ್ಯಕ್ರಮ
ಕಂದಾಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ಅಕ್ರಮ ಸಕ್ರಮ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಶ್ರೀರಾಮುಲು ಅಭಿಮಾನಿಗಳಾದ ಜಯಪಾಲಯ್ಯ, ರಾಮರೆಡ್ಡಿ ಭಾಗಿಯಾಗಿದ್ದರು.
ನಿಂತು ಕಾರ್ಯಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು :ಇನ್ನು, ಅಧಿಕಾರಿಗಳಿಗೆ ಕೂರಲು ಸಿದ್ಧಪಡಿಸಿದ್ದ ಆಸನಗಳನ್ನೆಲ್ಲ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಆವರಿಸಿದ್ದರಿಂದ ಅಧಿಕಾರಿಗಳಿಗೆ ನಿಲ್ಲುವ ಪರಿಸ್ಥಿತಿ ನಿರ್ಮಾಣ ಆಗಿತ್ತು. ವೇದಿಕೆಯಲ್ಲಿ ಸಾಮಾಜಿಕ ಅಂತರವನ್ನು ಗಾಳಿಗೆ ತೂರಲಾಗಿತ್ತು.