ಕರ್ನಾಟಕ

karnataka

ಚಳ್ಳಕೆರೆ: ಶಾಸಕ ರಘುಮೂರ್ತಿ ಸಹೋದರನ ಕಾರು ಬೈಕ್​ಗೆ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

By

Published : Sep 4, 2020, 7:01 PM IST

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಕಾರು ಮಾಲಿಕ ತಿಪ್ಪೇಸ್ವಾಮಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದು, ಅಪಘಾತದ ಬಳಿಕ ನಾಪತ್ತೆಯಾಗಿದ್ದಾನೆ

ಚಳ್ಳಕೆರೆ ಶಾಸಕರ ಸಹೋದರನ ಕಾರು ಡಿಕ್ಕಿ...ಬೈಕ್​ ಸವಾರ ಸಾವು

ಚಿತ್ರದುರ್ಗ:ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಸಹೋದರನ ಕಾರು‌ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​​​​ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಬೈಕ್ ಸವಾರ ಪಾಪೇಶ್(22) ಮೃತ. ಕಳೆದ 5 ದಿನಗಳ‌ ಹಿಂದೆಯಷ್ಟೇ ವಿವಾಹವಾಗಿದ್ದ ಎಂದು ತಿಳಿದುಬಂದಿದೆ. ಜಿಲ್ಲೆಯ ಬೆಳಗಟ್ಟ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಕಾರು ಮಾಲೀಕ ತಿಪ್ಪೇಸ್ವಾಮಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದು, ಅಪಘಾತದ ಬಳಿಕ ನಾಪತ್ತೆಯಾಗಿದ್ದಾನೆ.

ತುರವನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details