ಕರ್ನಾಟಕ

karnataka

ಪಡಿತರ ಅಕ್ಕಿಯ ಅಕ್ರಮ ಸಾಗಣೆ: ಆರೋಪಿಗಳ ಬಂಧನ

By

Published : Nov 6, 2019, 9:38 PM IST

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 14.5 ಟನ್ ಪಡಿತರ ಅಕ್ಕಿ ಜೊತೆ ಲಾರಿಯನ್ನು ವಶಪಡಿಸಿಕೊಂಡ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಸಮೀಪ ನಡೆದಿದೆ.

ಅಕ್ರಮ ಪಡಿತರ ಅಕ್ಕಿ ಸಾಗಟ

ಚಿತ್ರದುರ್ಗ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಸುಳಿವು ಪಡೆದ ಪೊಲೀಸರು ದಾಳಿ ನಡೆಸಿ 14.5 ಟನ್ ಪಡಿತರ ಅಕ್ಕಿ ಜೊತೆ ಲಾರಿಯನ್ನು ವಶಪಡಿಸಿಕೊಂಡ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಸಮೀಪ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ KA-52 9130 ನಂಬರ್​ನ ಲಾರಿ ಮೇಲೆ ದಾಳಿ ನಡೆಸಿದ ರಾಂಪುರ ಠಾಣೆಯ ಪಿಎಸ್ಐ ಗುಡ್ಡಪ್ಪರವರ ನೇತೃತ್ವದ ತಂಡ ಅಕ್ಕಿ ಸಮೇತ ಲಾರಿ ವಶಕ್ಕೆ ಪಡೆದಿದ್ದಾರೆ.

ಮೊಳಕಾಲ್ಮೂರು ತಾಲೂಕಿನ ರಾಂಪುರದ ವೀರಭದ್ರೇಶ್ವರ ಟ್ರೇಡರ್ಸ್ ಮಾಲೀಕ ಚಂದ್ರಶೇಖರ್ ಎಂಬುವವರಿಗೆ ಸೇರಿದ ಲಾರಿ ಇದಾಗಿದ್ದು, ಲಾರಿ ಮಾಲೀಕ ಮತ್ತು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details