ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ಮತ ಚಲಾಯಿಸಿದ ಶಾಸಕರು-ಶರಣರು... ಶ್ರೀ ಕೃಷ್ಣನ ಮೊರೆ ಯೋದ ಶೋಭಾ ಕರಂದ್ಲಾಜೆ!

ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ, ಜಿಲ್ಲೆಯ ಏಕೈಕ ಕೈ ಶಾಸಕ ರಘುಮೂರ್ತಿ ಹಾಗೂ ಮುರುಘಾ ಮಠದ ಪೀಠಾಧೀಪತಿ ಮುರುಘಾ ಶರಣರು ಮತದಾನ ಮಾಡಿದರು.

By

Published : Apr 18, 2019, 12:32 PM IST

ಮತ ಚಲಾಯಿಸಿದ ಶಾಸಕರು

ಚಿತ್ರದುರ್ಗ/ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕರು ಮತಗಟ್ಟೆಗೆ ಆಗಮಿಸಿ ಮತ ಚಲಾವಣೆ ಮಾಡಿದರು.

ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಚಿತ್ರದುರ್ಗ ನಗರದ ಪಟ್ಟದ ಪರಮೇಶ್ವರಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಕುಟುಂಬ ಸಮೇತರಾಗಿ ಆಗಮಿಸಿ ಎಪಿಎಂಸಿ ಆವರಣದಲ್ಲಿರುವ ಮತಗಟ್ಟೆ ಸಂಖ್ಯೆ 178ರಲ್ಲಿ ಮತದಾನ ಮಾಡಿದರು.

ಇನ್ನು ಜಿಲ್ಲೆಯ ಏಕೈಕ ಕೈ ಶಾಸಕ ರಘುಮೂರ್ತಿ ಜಿಲ್ಲೆಯ ಸ್ವಗ್ರಾಮದಲ್ಲಿ ಮತ ಚಲಾಯಿಸಿದರು. ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆ ಗ್ರಾಮದ ಮತಗಟ್ಟೆ ಸಂಖ್ಯೆ 04ರಲ್ಲಿ ಚಳ್ಳಕೆರೆ ಕೈ ಶಾಸಕ ರಘುಮೂರ್ತಿ ಮತದಾನ ಮಾಡಿದರು. ಹಾಗೆಯೇ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರು ನಗರದ ಕುರುಬರ ಹಟ್ಟಿಯ ಮತಗಟ್ಟೆ ಸಂಖ್ಯೆ 53 ರಲ್ಲಿ ಮತದಾನ ಮಾಡಿ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಮತದಾರರಿಗೆ ಕರೆ ನೀಡಿದರು.

ಮತ ಚಲಾಯಿಸಿದ ಶಾಸಕರು

3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಾಧ್ಯಮಗಳ ಜೊತೆ ಮಾತನಾಡಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉತ್ಸಾಹದ ವಾತಾವರಣವಿದೆ. ಶ್ರೀ ಕೃಷ್ಣ ಹಾಗೂ ಅನಂತೇಶ್ವರನಿಗೆ ಬೆಳಿಗ್ಗೆ ಪೂಜೆ ಸಲ್ಲಿಸಿದ್ದಾಗಿ ತಿಳಿಸಿದರು.

ನನ್ನ ಮತ ಬೆಂಗಳೂರಿನಲ್ಲಿ ಇರುವ ಕಾರಣ ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಿ ಮತ ಹಾಕುತ್ತೇನೆ. ಕಳೆದ ಬಾರಿ 1,82,000 ಮತಗಳ ಅಂತರದಲ್ಲಿ ಗೆದ್ದಿದ್ದೆವು. ಈ ಬಾರಿ ಮೂರು ಲಕ್ಷಕ್ಕೂ ಅಧಿಕ ಮತಗಳಲ್ಲಿ ಗೆಲ್ಲುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details