ಕರ್ನಾಟಕ

karnataka

By

Published : Sep 13, 2019, 3:37 PM IST

ETV Bharat / state

ಆರು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದಂತಹ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ

ಚಿತ್ರದುರ್ಗ : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಆರು ವರ್ಷದ ಬಾಲಕಿ ಮೇಲೆ ನಡೆದಂತಹ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಐಡಿಎಸ್ಓ ಹಾಗೂ ಎಐಎಮ್ಎಸ್​ಎಸ್​ ನೇತೃತ್ವದಲ್ಲಿ ನಡೆದ ಪ್ರತಿಭಟನೆ
ಎಐಡಿಎಸ್ಓ ಹಾಗೂ ಎಐಎಮ್ಎಸ್​ಎಸ್​ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುವ ಮೂಲಕ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ಇದೇ ತಿಂಗಳು 9 ರಂದು ಗೋಣಿ ಚೀಲದಲ್ಲಿ ಬಾಲಕಿ ಶವವಾಗಿ ಸಿಕ್ಕಿದ್ದು ಇದೊಂದು ಪೈಶಾಚಿಕ ಕೃತ್ಯವಾಗಿದೆ. ಸಂಬಂಧಪಟ್ಟ ಇಲಾಖೆ ಈ ಘಟನೆಯ ಕುರಿತು ತನಿಖೆ ಚುರುಕುಗೊಳಿಸುವ ಮೂಲಕ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.

ABOUT THE AUTHOR

...view details