ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರ ದುರ್ಮರಣ - ಲಾರಿ‌ಗೆ ಓಮ್ನಿ ಕಾರು ಡಿಕ್ಕಿ

ಲಾರಿಗೆ ಓಮ್ನಿ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗದ ಕ್ಯಾದಿಗ್ಗೆರೆ ಬಳಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂವರ ಸ್ಥಿತಿ ಗಂಭೀರ
ಮೂವರ ಸ್ಥಿತಿ ಗಂಭೀರ

By

Published : Jan 6, 2021, 6:48 PM IST

Updated : Jan 6, 2021, 8:19 PM IST

‌ಚಿತ್ರದುರ್ಗ: ನಿಂತಿದ್ದ ಲಾರಿ‌ಗೆ ಓಮ್ನಿ ಕಾರು ಡಿಕ್ಕಿಯಾಗಿ ಓರ್ವ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರೇಣುಕಮ್ಮ (55), ಶಂಕರ್ ಪುಟ್ಟಲಿಂಗಯ್ಯ( 39)‌, ಶಿವರಾಜು (55) ಮೃತ ದುರ್ದೈವಿಗಳಾಗಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಭೀಕರ ರಸ್ತೆ ಅಪಘಾತ

ಅಪಘಾತವಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Last Updated : Jan 6, 2021, 8:19 PM IST

ABOUT THE AUTHOR

...view details