ಚಿತ್ರದುರ್ಗ:ಸಾಣಿಹಳ್ಳಿ ಗ್ರಾಮದ ತರಳಬಾಳು ಶಾಖಾಮಠದಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶ್ರೀಗಂಧ ಮರಗಳ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ಲೋಕೇಶ್ ತಿಪ್ಪಣ್ಣ (22), ಕಪಗೆರೆ ಗ್ರಾಮದ ಕೆಂಚಪ್ಪ ಪ್ರಹ್ಲಾದ್ (24) ಹಾಗೂ ಬಸವರಾಜ್ ದುರ್ಗಪ್ಪ(36) ಬಂಧಿತ ಆರೋಪಿಗಳು. ಬಂಧಿತರಿಂದ 3,700 ಕೆಜಿ ತೂಕದ 15,000 ರೂ. ಮೌಲ್ಯದ ಶ್ರೀಗಂಧ, ಕೃತ್ಯಕ್ಕೆ ಬಳಸಿದ್ದ ಮೋಟರ್ ಸೈಕಲ್ ಮತ್ತು ಒಂದು ಗರಗಸವನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ ವರ್ಷ ಡಿ.24 ರಂದು ಸಾಣೆಹಳ್ಳಿ ಗ್ರಾಮದ ಮಠದಲ್ಲಿ ಶ್ರೀಗಂಧ ಮರಗಳ ಕಳ್ಳತನವಾಗಿತ್ತು. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕಣರದ ಜಾಡು ಹಿಡಿದು ಹೊರಟ ಖಾಕಿ ಪಡೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.