ಕರ್ನಾಟಕ

karnataka

By

Published : Oct 1, 2019, 1:09 PM IST

ETV Bharat / state

ಹೊಸದುರ್ಗ ಬಳಿ ವೇದಾವತಿ ನದಿಗೆ ಬಿದ್ದ ಟೆಂಪೋ: ಚಾಲಕ ಸಾವು

ಇಂದು ಬೆಳಗಿನ ಜಾವ ವೇದಾವತಿ ನದಿಗೆ ಟೆಂಪೊವೊಂದು ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದ ಬ್ರಿಡ್ಜ್ ಬಳಿ ನಡೆದಿದೆ.

ವೇದಾವತಿ ನದಿ

ಚಿತ್ರದುರ್ಗ: ಜಿಲ್ಲೆಯ ವೇದಾವತಿ ನದಿಗೆ ಟೆಂಪೊವೊಂದು ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ನಡೆದಿದೆ.

ಘಟನೆ ಬೆಳಗಿನ ಜಾವ ನಡೆದಿದ್ದು, ಚಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸದ್ಯ ಚಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ವಾಹನ ಮೇಲೆತ್ತಲು ಹರಸಾಹಸ ಪಡಬೇಕಾಯಿತು. ಹೊಸದುರ್ಗ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ABOUT THE AUTHOR

...view details