ಚಿತ್ರದುರ್ಗ: ಜಿಲ್ಲೆಯಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ವಿಷಾಹಾರ ಸೇವಿಸಿ ಮೂವರು ಮೃತಪಟ್ಟಿದ್ದರೆ, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.
ನಿನ್ನೆ ತ್ರಿ (ರಾಮಂಗಳವಾರ) ರಾಗಿಮುದ್ದೆ, ಕಾಳು ಸಾಂಬಾರ್ ಸೇವಿಸಿದ್ದ ಒಂದೇ ಕುಟುಂಬದ ಐವರು ಅಸ್ವಸ್ಥರಾಗಿದ್ದು, ಗ್ರಾಮಸ್ಥರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಿಪ್ಪಾನಾಯ್ಕ್, ಪತ್ನಿ ಸುಧಾಬಾಯಿ, 75 ವರ್ಷದ ವೃದ್ಧೆ ಗುಂಡಿಬಾಯಿ ಮೃತಪಟ್ಟಿದ್ದಾರೆ.