ಕರ್ನಾಟಕ

karnataka

By

Published : Aug 7, 2021, 11:16 PM IST

ETV Bharat / state

ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವು

ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಕೃಷಿ ಹೊಂಡದಲ್ಲಿ ಬಿದ್ದು ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ.

Two boys drown in  farm pond
ಕೃಷಿಹೊಂಡದಲ್ಲಿ ಬಿದ್ದು ಬಾಲಕರಿಬ್ಬರು ಸಾವು

ಚಿತ್ರದುರ್ಗ:ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ನಡೆದಿದೆ.

ಸಿದ್ದೇಶ್ (10) ಹಾಗೂ ರಘು (12) ಮೃತ ಬಾಲಕರು. ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಬಿದ್ದ ಈ ಬಾಲಕರು, ಈಜು ಬಾರದ್ದರಿಂದ ಮೇಲೆದ್ದು ಬರಲಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಬಾಲಕ ರಘು 6 ಹಾಗೂ ಸಿದ್ದೇಶ್ 4ನೇ ತರಗತಿಯಲ್ಲಿ ಓದುತ್ತಿದ್ದರು. ಕೃಷಿ ಹೊಂಡದಲ್ಲಿ ಬಾಲಕರ ಮೃತದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು. ಐಮಂಗಲ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಸಿಎಂ ಜಗನ್​ ಕಚೇರಿ ಬಳಿ ಮಹಿಳೆ ಮೇಲೆ ಅತ್ಯಾಚಾರ... ಆರೋಪಿ ಬಂಧನ

ABOUT THE AUTHOR

...view details