ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ 9 ಮಂದಿ ಸಾವನ್ನಪ್ಪಿದ್ದು 243 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. 519 ಮಂದಿ ಗುಣಮುಖರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾವನ್ನಪ್ಪಿದ 9 ಮಂದಿಯಲ್ಲಿ 8 ಮಂದಿ ಮಂಗಳೂರು ತಾಲೂಕಿನವರಾಗಿದ್ದು, ಒಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 237 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 237 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇದರಲ್ಲಿ 189 ಮಂದಿ ಮಂಗಳೂರು ತಾಲೂಕು, 30 ಮಂದಿ ಬಂಟ್ವಾಳ ತಾಲೂಕು, 6 ಮಂದಿ ಪುತ್ತೂರು ತಾಲೂಕು, 4 ಮಂದಿ ಸುಳ್ಯ, 10 ಮಂದಿ ಬೆಳ್ತಂಗಡಿ ತಾಲೂಕಿನವರಾಗಿದ್ದಾರೆ. 4 ಮಂದಿ ಹೊರಜಿಲ್ಲೆಯವರಿಗೂ ಕೊರೊನಾ ದೃಢಪಟ್ಟಿದೆ.