ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 414 ಕೊರೊನಾ ಸೋಂಕು ಪತ್ತೆ, 6 ಮಂದಿ ಸಾವು - Mangalore

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 346 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Mangalore
Mangalore

By

Published : Sep 2, 2020, 7:37 PM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 414 ಕೊರೊನಾ ಸೋಂಕಿತ ಪ್ರಕರಣಗಳು‌ ದೃಢಪಟ್ಟಿದ್ದು, ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ದಾಖಲಾದ ಅತೀ ಹೆಚ್ಚಿನ ಪ್ರಕರಣವಾಗಿದೆ.

ಮಂಗಳೂರು ತಾಲೂಕಿನಲ್ಲಿ 222, ಬಂಟ್ವಾಳ ತಾಲೂಕಿನಲ್ಲಿ 64, ಪುತ್ತೂರು ತಾಲೂಕಿನಲ್ಲಿ 49, ಸುಳ್ಯ ತಾಲೂಕಿನಲ್ಲಿ 31, ಬೆಳ್ತಂಗಡಿ ತಾಲೂಕಿನಲ್ಲಿ 28 ಪ್ರಕರಣ ದಾಖಲಾಗಿದ್ದರೆ ಹೊರಜಿಲ್ಲೆಯ 20 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ13,479ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅರು ಮಂದಿ ಸಾವನ್ನಪ್ಪಿದ್ದಾರೆ. ಮಂಗಳೂರು ತಾಲೂಕಿನ 4, ಬೆಳ್ತಂಗಡಿ ತಾಲೂಕಿನ 1 ಮತ್ತು ಹೊರಜಿಲ್ಲೆಯ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 381 ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 346 ಮಂದಿ ಗುಣಮುಖರಾಗಿದ್ದು, ಈವರೆಗೆ 10,498 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2,600 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details