ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ 7 ಮಂದಿ ಸಾವು, 446 ಪಾಸಿಟಿವ್ - Mangalore Corona News

ಜಿಲ್ಲೆಯಲ್ಲಿ ಇಂದು 197 ಮಂದಿ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಈವರೆಗೆ 12,609 ಮಂದಿ ಗುಣಮುಖರಾಗಿದ್ದಾರೆ.

Mangalore
ಮಂಗಳೂರು

By

Published : Sep 11, 2020, 9:02 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ‌ಕೊರೊನಾದಿಂದ 7 ಮಂದಿ ಸಾವನ್ನಪ್ಪಿದ್ದು 446 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾದಿಂದ ಸಾವನ್ನಪ್ಪಿದ 7 ಮಂದಿಯಲ್ಲಿ 3 ಮಂದಿ ಮಂಗಳೂರು ತಾಲೂಕು ಮತ್ತು 4 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 434ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 446 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. 446 ಮಂದಿಯಲ್ಲಿ 248 ಮಂದಿ ಮಂಗಳೂರು ತಾಲೂಕು,85 ಮಂದಿ ಬಂಟ್ವಾಳ ತಾಲೂಕು 13 ಮಂದಿ ಪುತ್ತೂರು ತಾಲೂಕು, 23 ಮಂದಿ ಸುಳ್ಯ ತಾಲೂಕು, 52 ಮಂದಿ ಬೆಳ್ತಂಗಡಿ ತಾಲೂಕು ಮತ್ತು 25 ಮಂದಿ ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 16,558 ಮಂದಿಗೆ ಕೊರೊನಾ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇಂದು 197 ಮಂದಿ ಗುಣಮುಖರಾಗಿದ್ದು ಈವರೆಗೆ 12,609 ಮಂದಿ ಗುಣಮುಖರಾಗಿದ್ದಾರೆ ಹಾಗೂ 3,515 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details