ಕರ್ನಾಟಕ

karnataka

By

Published : Jul 29, 2020, 12:01 AM IST

ETV Bharat / state

ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನಕಾರಿ ಧ್ವನಿ ಮುದ್ರಣ : ದೂರು ದಾಖಲು

ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ‌ಕಾರಿಯಾಗಿ ಮಾತನಾಡಿ, ಧ್ವನಿ ಮುದ್ರಣ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ‌ ಕಳುಹಿಸಿದ್ದ ಸುರೇಶ್ ಆಚಾರಿ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು

ಉಳ್ಳಾಲ: ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಕಾರಿಯಾಗಿ ಮಾತನಾಡಿ, ಧ್ವನಿ ಮುದ್ರಣ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ‌ ಕಳುಹಿಸಿದ್ದ ಸುರೇಶ್ ಆಚಾರಿ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮಂಗಳೂರು ಮಂಡಲ ವತಿಯಿಂದ ದೂರು ನೀಡಲಾಗಿದೆ.

ಆರೋಪಿ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಪಿಎಸ್​ಐ ರೇಖಾ ಅವರಲ್ಲಿ ಮನವಿ ಮಾಡಿದರು. ಈ ಸಂಧರ್ಭ ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ ಕುಮಾರ್ ರೈ ಬೋಳಿಯಾರು ಸೇರಿದಂತೆ ಇತರರು ಇದ್ದರು.

ABOUT THE AUTHOR

...view details