ಕರ್ನಾಟಕ

karnataka

ಅಕ್ರಮವಾಗಿ ಜಾನುವಾರು ಸಾಗಾಟ ಆರೋಪ: ಓರ್ವನ ಬಂಧನ

ಜೀಪಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, ಜಾನುವಾರು ಮತ್ತು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

By

Published : Aug 1, 2020, 12:44 PM IST

Published : Aug 1, 2020, 12:44 PM IST

Cattle
Cattle

ಬಂಟ್ವಾಳ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಠಾಣೆಯ ಎಸ್​​ಐ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ಯಶಸ್ವಿಯಾಗಿದೆ.

ಇಡ್ಕಿದು ಗ್ರಾಮದ ಮಿತ್ತೂರು ಬರ್ಕೊಡಿ ಏಮಾಜೆ ನಿವಾಸಿ ಪದ್ಮನಾಭ ಗೌಡ (42) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ಹಂಝ ಎಂಬಾತ ಪರಾರಿಯಾಗಿದ್ದಾನೆ. ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿ ಜೀಪಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿದರು.

ಪೊಲೀಸರು ವಾಹನ ನಿಲ್ಲಿಸುವಂತೆ ತಿಳಿಸಿದಾಗ ಚಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ವಾಹನದ ಎಡ ಬದಿಯಲ್ಲಿ ಕುಳಿತ್ತಿದ್ದ ಮತ್ತೊಬ್ಬ ಆರೋಪಿ ಜೀಪಿನಿಂದ ಇಳಿದು ಗುಡ್ಡದ ಮಾರ್ಗವಾಗಿ ಓಡಿ ತಪ್ಪಿಸಿಕೊಂಡಿದ್ದಾನೆ. ಬಳಿಕ ಪೊಲೀಸರು ಚಾಲಕನನ್ನು ಹಿಡಿದು, ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details