ಕರ್ನಾಟಕ

karnataka

ETV Bharat / state

ಆಟೋ, ಮಾರುತಿ ಓಮ್ನಿ ನಡುವೆ ಡಿಕ್ಕಿ: ಓರ್ವ ಸಾವು

ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟಿರುವ ಘಟನೆ ಪಾಣಾಜೆ- ಸೂರಂಬೈಲು ಸಮೀಪ ನಡೆದಿದೆ.

By

Published : Dec 5, 2020, 8:00 PM IST

accident
ಡಿಕ್ಕಿ

ಪುತ್ತೂರು(ದ.ಕ):ಪಾಣಾಜೆ- ಸೂರಂಬೈಲು ಸಮೀಪ ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ರಿಕ್ಷಾದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ABOUT THE AUTHOR

...view details